Malenadu Mitra
ರಾಜ್ಯಶಿವಮೊಗ್ಗ

ಡಾಕಪ್ಪರಿಗೆ ಜಾನಪದ ಶ್ರೀ ಪ್ರಶಸ್ತಿ ಪ್ರದಾನ


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವರಿಗೆ ಜೀವಮಾನ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ವಿ.ಸುನೀಲ್ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಣ್ಣೂರಿನ ಡಾಕಪ್ಪ ಅವರಿಗೆ ಜಾನಪದ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡೊಳ್ಳು ಕುಣಿತದ ಮೂಲಕ ಜಾನಪದ ಕಲೆ ಕ್ಷೇತ್ರಕ್ಕೆ ಅವರು ನೀಡಿದ್ದ ಕೊಡುಗೆ ಪರಿಗಣಿಸಿ ಈ ಪುರಸ್ಕಾರ ನೀಡಲಾಯಿತು. ಪ್ರಶಸ್ತಿಯು ಐದು ಲಕ್ಷ ರೂ.ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕಲಾವಿದ ನರಸಿಂಹಲು ವಡಾವಡಿ,ಇಲಾಖೆ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕ ರಂಗಪ್ಪ ಮತ್ತಿತರರು ಇದ್ದರು.

Ad Widget

Related posts

ಪುನೀತ್‌ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ , ,ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಅಪ್ಪು ಪುತ್ಥಳಿ ಅನಾವರಣ

Malenadu Mirror Desk

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ: ೭೨ ಸಾವಿರ ರೂ. ವಂಚನೆ

Malenadu Mirror Desk

ದೇವಸ್ಥಾನಗಳಲ್ಲಿ ಸಮಾಜಮುಖಿ ಕೆಲಸಗಳಾಗಲಿ: ವಿನಯ್ ಗುರೂಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.