Malenadu Mitra
ರಾಜ್ಯಶಿವಮೊಗ್ಗ

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಖಂಡಿಸಿ ಶಿವಮೊಗ್ಗ ಶಾಶ್ವತಿ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಾಂಸ್ಕೃತಿಕ ನಗರ ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಪುಣ್ಯ ಸ್ಥಳದಲ್ಲಿ ಇಂತಹ ಅಮಾನವೀಯ ಪೈಶಾಚಿಕ ನೀಚ ಕೃತ್ಯ ನಡೆದಿರುವುದು ನಾಡಿನ ಜನತೆ ತಲೆ ತಗ್ಗಿಸುವ ಸಂಗತಿಯಾಗಿದೆ. ಕಾಮುಕರಿಗೆ ಕೇವಲ ಜೈಲು ಶಿಕ್ಷೆ ನೀಡದೇ ಗಲ್ಲು ಶಿಕ್ಷೆ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಮತ್ತು ಇಂತಹ ಘಟನೆಗಳು ನಡೆದಾಗ ರಾಜಕಾರಣಿಗಳು ವಿವಾದಾತ್ಮಕ ಹೇಳಿಕೆ ನೀಡಬಾರದು. ಇದರ ಜೊತೆಗೆ ಪೋಷಕರು ಕೂಡ ಎಚ್ಚರಿಕೆ ವಹಿಸಬೇಕು. ಶಿಕ್ಷೆ ವಿಳಂಬವಾಗದೇ ಆದಷ್ಟು ಶೀಘ್ರ ವಿಚಾರಣೆ ನಡೆಸಿ ತೀರ್ಪು ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ವೇದಿಕೆಯ ಅಧ್ಯಕ್ಷೆ ಡಾ. ಶಾಂತಾ ಸುರೇಂದ್ರ, ಲೋಲಾಕ್ಷಿ, ಭಾಗ್ಯಲಕ್ಷ್ಮಿ, ಶಾಂತಾ, ಮಂಜುಳಾ, ಲಲಿತಾ, ವಾಣಿ, ಪ್ರೇಮಾ, ನಂದಿನಿ, ಮಾಲಾ, ಮಂಜುಳಾ, ಮೀನಾ, ಸ್ನೇಹ, ಕೀರ್ತಿ, ಸುಜಾತಾ, ಸುಮಿತ್ರ

Ad Widget

Related posts

ಮಕ್ಕಳ ಶಿಕ್ಷಣದಲ್ಲಿ ಸೂಕ್ಷ್ಮ, ಎಚ್ಚರಿಕೆಯ ಹೆಜ್ಜೆ ಅಗತ್ಯ, ಶಿವಮೊಗ್ಗದಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk

14 ದಿನ ಜನತಾ ಕರ್ಫ್ಯೂ, ನಿಯಂತ್ರಣಕ್ಕೆ ಬಾರದಿದ್ದಲ್ಲಿ ಮತ್ತೊಂದು ವಾರ ಮುಂದುವರಿಯಲಿದೆ : ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

Malenadu Mirror Desk

ಸಾಮಾನ್ಯ ಜನರ ಏಳಿಗೆಯೇ ನಿಜವಾದ ಅಭಿವೃದ್ಧಿ, ಪತ್ರಿಕಾ ಸಂವಾದದಲ್ಲಿ ಸಚಿವ ಮಧುಬಂಗಾರಪ್ಪ ಆಶಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.