Malenadu Mitra
ರಾಜ್ಯಶಿವಮೊಗ್ಗ

ಕಲ್ಲು ಎತ್ತಿಹಾಕಿ ಉದ್ಯಮಿ ಕೊಲೆ, ಕಲ್ಲೂರು ಮಂಡ್ಲಿ ತೋಟದಲ್ಲಿ ನಡೆದ ಘಟನೆ

ಶಿವಮೊಗ್ಗ ನಗರ ಸಮೀಪದ ಸಮೀಪದ ಕಲ್ಲೂರು ಮಂಡ್ಲಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಹತ್ಯೆಯಾಗಿರುವ ವ್ಯಕ್ತಿಯಾಗಿದ್ದು, ತೋಟವೊಂದರಲ್ಲಿ ಕಲ್ಲು ಎತ್ತಿಹಾಕಿ ಸಾಯಿಸಲಾಗಿದೆ. ಶುಕ್ರವಾರ ಸಂಜೆ 7 ಗಂಟೆ ಹೊತ್ತಿಗೆ ದುಷ್ಕøತ್ಯ ಎಸಗಲಾಗಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂಧಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಿದ್ದು, ಸ್ಥಳಕ್ಕೆ ಹಿರಿಯ ಪೊಲಿಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಆನೆ ಹಾವಳಿ : ಬೆಳೆ ಹಾನಿ ಪರಿಶೀಲಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್

Malenadu Mirror Desk

ಶಿಕಾರಿಪುರ ಹಾಗೂ ಸೊರಬ ನನ್ನ ಎರಡು ಕಣ್ಣುಗಳಿದ್ದಂತೆ: ಸಚಿವ ಮಧುಬಂಗಾರಪ್ಪ,ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವ ಮಧುಬಂಗಾರಪ್ಪನವರಿಗೆ ಅಭಿನಂದನೆ

Malenadu Mirror Desk

ಆದರ್ಶ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಂಬನಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.