Malenadu Mitra
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ನಡುದಾರಿಯಲ್ಲಿ ಬೈಕ್ ನಿಲ್ಲಿಸಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದಲ್ಲಿ ಬುಧವಾರ ವರದಿಯಾಗಿದೆ.
ಮೃತನನ್ನು ಅಕ್ಲಾಪುರ ವಾಸಿ ರಾಘವೇಂದ್ರ(೪೦) ಎಂದು ಗುರುತಿಸಲಾಗಿದೆ.
ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿವ್ಯಾಜ್ಯದ ವೈಯಕ್ತಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತ ವ್ಯಕ್ತಿ ಪತ್ನಿ,ಎರಡು ಮಕ್ಕಳನ್ನು ಅಗಲಿದ್ದು, ಈ ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಫಾರ್ಮಸಿ ಕಾಲೇಜಿನಲ್ಲಿ ’ಕಲಾ ಸಂಭ್ರಮ – ೨೦೨೩’, ಬದುಕಿಗಾಗಿ ಕಲಿಯಲು ಪ್ರಯತ್ನಿಸಿ : ಜಿ.ಎಸ್.ನಾರಾಯಣರಾವ್

Malenadu Mirror Desk

ಸಿ.ಟಿ.ರವಿ ಪ್ರಕರಣ: ಸಿಐಡಿ ತನಿಖೆ ಸೂಕ್ತವಲ್ಲ ಎಂದ ಈಶ್ವರಪ್ಪ

Malenadu Mirror Desk

ಫ್ಲೆಕ್ಸ್ ಗಲಾಟೆ ಚಾಕು ಇರಿತ ಒಬ್ಬನಿಗೆ ಮಾತ್ರ, ಅಮಾಯಕನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ನಗರಾದ್ಯಂತ ಮೂರು ದಿನ ನಿಷೇದಾಜ್ಞೆ, ಶಾಲೆಗಳಿಗೆ ಮಂಗಳವಾರ ರಜೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.