Malenadu Mitra
ರಾಜ್ಯಶಿವಮೊಗ್ಗ

ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಮ್ಸ್ ಎದುರು ವೈದ್ಯರ ಪ್ರತಿಭಟನೆ

ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಶುಲ್ಕ ಪುನರ್ ರಚಿಸಬೇಕು. ಕೋವಿಡ್ ಅಪಾಯಭತ್ಯೆ ಪಾವತಿಸಬೇಕು. ಸ್ನಾತಕೋತ್ತರ ಪದವಿಧರರು ಮತ್ತು ಇಂಟರ್ನಲ್‌ಗಳಿಗೆ ಸ್ಟೈಫಂಡ್ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಸಿಮ್ಸ್ ಮೆಡಿಕಲ್ ಕಾಲೇಜು ಎದುರು ಪ್ರತಿಭಟನೆ ನಡೆಸಲಾಯಿತು.
ಕೊರೋನಾ ಸಾಂಕ್ರಮಿಕ ರೋಗದ ನಿರ್ವಹಣೆ ಸಂದರ್ಭದಲ್ಲಿ ಸ್ಥಾನಿಕ ವೈದ್ಯರು ಹಗಲಿರುಳು ಶ್ರಮಿಸಿದ್ದಾರೆ. ಪ್ರತಿಕೂಲ ಪರಿಸ್ಥಿತಿಯಲ್ಲಿ ಸೋಂಕಿಗೆ ಒಳಗಾಗುವ ಅಪಾಯವಿದ್ದರೂ ಕೆಲಸ ಮಾಡಿದ್ದೇವೆ. ಸ್ನಾತಕೋತ್ತರ ಪದವಿಧರರು ಕನಿಷ್ಠ ಕ್ಲಿನಿಕಲ್ ಮತ್ತು ಇತರೆ ಕೌಶಲ್ಯ ಕಲಿಯದೇ ಅರ್ಧದಷ್ಟು ಕೋರ್ಸ್ ಅವಧಿಯನ್ನು ಕಳೆದುಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಎಲ್ಲ ಸ್ಥಾನಿಕ ವೈದ್ಯರಿಗೆ ತಿಂಗಳಿಗೆ ೧೦ ಸಾವಿರ ರೂ. ಕೋವಿಡ್ ಭತ್ಯೆ ಘೋಷಿಸಿದೆ. ಘೋಷಣೆಯಾಗಿ ೬ ತಿಂಗಳು ಕಳೆದರೂ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಇಂದಿಗೂ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಬಗೆಗಿನ ನಿರ್ಲಕ್ಷ್ಯವನ್ನು ಇದು ತೋರಿಸುತ್ತದೆ ಎಂದರು.
ಸ್ಥಾನಿಕ ವೈದ್ಯರ ಶೈಕ್ಷಣಿಕ ಶುಲ್ಕವನ್ನು ೩೦ ಸಾವಿರದಿಂದ ೧.೨ ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಇದು ಸುಮಾರು ಶೇ.೪೦೦ರಷ್ಟು ಹೆಚ್ಚಳವಾಗಿದೆ. ಯಾವುದೇ ರಿಯಾಯಿತಿ ಇಲ್ಲದೇ ಸಂಪೂರ್ಣ ಮೊತ್ತ ಪಾವತಿಸಬೇಕಿರುವುದರಿಂದ ತೊಂದರೆಯಾಗಿದೆ ಎಂದು ದೂರಿದರು.
ಈ ಹಿಂದೆ ಪ್ರತಿಭಟನೆಯ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಭರವಸೆಯ ಮೇರೆಗೆ ಮುಷ್ಕರ ಕೈಬಿಡಲಾಗಿತ್ತು. ಆದರೆ, ಇದುವರೆಗೂ ಭರವಸೆ ಈಡೇರಿಸಿಲ್ಲ. ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ ಕೋವಿಡ್ ಅಪಾಯಭತ್ಯೆ ಪ್ಯಾಕೇಜ್ನಿಂದ ಸ್ಥಾನಿಕ ವೈದ್ಯರನ್ನು ಹೊರಗಿಡಲಾಗಿದೆ ಎಂದು ಆರೋಪಿಸಿದರು.
ಕೂಡಲೇ ಬೇಡಿಕೆ ಈಡೇರಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸ್ಥಾನಿಕ ವೈದ್ಯರ ಸಂಘದ ಅಧ್ಯಕ್ಷ ಡಾ. ನವೀನ್ ಪ್ರಸಾದ್, ಪ್ರಮುಖರಾದ ಡಾ. ನಮ್ರತಾ, ಡಾ. ಅವಿನಾಶ್, ಡಾ. ರಾಹುಲ್ ಮೊದಲಾದವರಿದ್ದರು.

Ad Widget

Related posts

ಅಪ್ಪಾಜಿ ಗೌಡರಿಲ್ಲದ ಭದ್ರಾವತಿ ನಗರಸಭೆ ಚುನಾವಣೆ ಹೇಗಿದೆ ಗೊತ್ತಾ ?

Malenadu Mirror Desk

ಕಾಡಾಕ್ಕೆ ಅನುದಾನ: ಸಂಸದರ ಭರವಸೆ

Malenadu Mirror Desk

ಲೋಲಿತ್ ಅಂತ ಅವಸರವೇನಿತ್ತು ನಿನಗೆ ?
ಆರ್ಥೋ ಸರ್ಜನ್ ಸಾವಿಗೆ ಕಾರಣ ಏನು ಗೊತ್ತೇ….

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.