Malenadu Mitra
ರಾಜ್ಯಶಿವಮೊಗ್ಗ

ಕಾರಿಗೆ ಟಿಪ್ಪರ್ ಡಿಕ್ಕಿ ಇಬ್ಬರು ಸಾವು


ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಡೈರಿ ಸಮೀಪ ಗುರುವಾರ ನಡೆದಿದೆ.
ಅಪಘಾತದಲ್ಲಿ ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ(39) ಹಾಗೂ ರಾಮಚಂದ್ರ(40) ಎಂಬುವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಷಣ್ಮುಖ ಹಾಗೂ ರಾಮಚಂದ್ರ ಅವರು ಕೆಲಸದ ನಿಮಿತ್ತ ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ಹೊರಟಿದ್ದರು. ಇವರು ಸಂಚರಿಸುತ್ತಿದ್ದ ಕಾರು ಮಾಚೇನಹಳ್ಳಿ ಡೈರಿಯ ಬಳಿ ತಲುಪಿದಾಗ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಡಿವೈಡರ್ ದಾಟಿ ಬಂದು ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಆಸ್ತಿ ತೆರಿಗೆ ಹೆಚ್ಚಳ ಮರುಪರಿಶೀಲನೆಗೆ ನಿರ್ಧಾರ

Malenadu Mirror Desk

ತುಂಬಿ ಹರಿವ ಚಾನಲ್‌ಗೆ ಕಾರು ಹಾರಿಸಿ ಆತ್ಮಹತ್ಯೆ, ನಾಲ್ವರಲ್ಲಿ ಇಬ್ಬರು ಸಾವು, ಬದುಕುಳಿದ ಇನ್ನಿಬ್ಬರು

Malenadu Mirror Desk

ಮಲೆನಾಡಿನಲ್ಲಿ ಹಿಜಾಬ್- ಕೇಸರಿ ಶಾಲ್ ವಿವಾದ ತಾರಕಕ್ಕೆ ಕಲ್ಲುತೂರಾಟ, ಕಾಲೇಜಿಗೆ ರಜೆ: ನಿಷೇಧಾಜ್ಞೆ ಹೇರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.