Malenadu Mitra
ರಾಜ್ಯಶಿವಮೊಗ್ಗ

ಭಾರತಿನಾಗರಾಜ್ ಪುರದಾಳು ಪಂಚಾಯಿತಿ ಅಧ್ಯಕ್ಷೆ,ಎಸ್.ಆರ್.ಗಿರೀಶ್ ಉಪಾಧ್ಯಕ್ಷ

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಭಾರತಿ ನಾಗರಾಜ್, ಉಪಾಧ್ಯಕ್ಷರಾಗಿ ಎಸ್.ಆರ್.ಗಿರೀಶ್ ಅವಿರೋದವಾಗಿ ಆಯ್ಕೆಯಾದರು.
ಶನಿವಾರ ನಡೆದ ಚುನಾವಣೆಯಲ್ಲಿ ಹಿರಿಯ ತೋಟಗಾರಿಕಾ ಅಧಿಕಾರಿ ವಿಶ್ವನಾಥ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿದರು. ೯ ಮಂದಿ ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯಿತಿಗೆ ಡಿ.೨೭ ರಂದು ಚುನಾವಣೆ ನಡೆದಿತ್ತು. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಿಗದಿಯಾಗಿತ್ತು. ಭಾರತಿ ನಾಗರಾಜ್ ಮತ್ತು ಗಿರೀಶ್ ಇಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.

ಪುರದಾಳು ಗ್ರಾಮದಿಂದ ಮೂರನೇ ಭಾರಿ ಆಯ್ಕೆಯಾಗಿರುವ ಭಾರತಿ ಅವರು ಮೂರನೇ ಬಾರಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಗುಡ್ಡದ ಅರಕೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಗಿರೀಶ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಗಿರೀಶ್ ಎರಡನೇ ಬಾರಿ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪ್ರಮುಖರಾದ ಹೆಬ್ಬೂರು ನಾಗರಾಜ್, ದತ್ತರಾಜ್, ಕೃಷ್ಣಪ್ಪ, ಪ್ರದೀಪ್ ಹೆಬ್ಬೂರು, ಗೋವಿಂದಪ್ಪ, ವಿಶ್ವನಾಥ್, ಶಾಂತರಾಜ್, ಮಂಜಪ್ಪನಾಯ್ಕ, ಜಗದೀಶ್ ಹಾಡಿಕೇವಿ, ಕೊಲ್ಲಪ್ಪ ಮತ್ತಿತರರು ಹಾಜರಿದ್ದರು.

Ad Widget

Related posts

ಸ್ಮಾರ್ಟಾದ ಸಿಟಿಯೂ…ಜಖಂ ಆಗುತ್ತಿರುವ ಕಾರುಗಳೂ…

Malenadu Mirror Desk

ಸಿಗಂದೂರು ಕ್ಷೇತ್ರದಿಂದ ಜನಮುಖಿ ಕೆಲಸ, ನವರಾತ್ರಿ ಕಾರ್ಯಕ್ರಮದಲ್ಲಿ ಅರುಣಾನಂದ ಸ್ವಾಮೀಜಿ ಪ್ರಶಂಸೆ

Malenadu Mirror Desk

ಜೋಕಾಲಿ ದುರಂತಕ್ಕೆ ಮತ್ತೊಬ್ಬ ಬಾಲಕಿ ಬಲಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.